ಬೋಳಿಯಾರು: ಕಾಲುಜಾರಿ ನದಿಗೆ ಬಿದ್ದು ಬಾಲಕ ಮೃತ್ಯು
ಮಂಗಳೂರು: ನದಿ ದಡದಲ್ಲಿ ಕಾಲು ತೊಳೆಯಲು ಇಳಿದ ಬಾಲಕ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ದುರ್ಮರಣಕ್ಕೀಡಾದ ಘಟನೆ ಇಂದು ಸಂಜೆ ಬೋಳಿಯಾರು ಗ್ರಾಮದ ಧರ್ಮನಗರ ಸಮೀಪದ ಜಲಕದಕಟ್ಟೆ ಎಂಬಲ್ಲಿ ನಡೆದಿದೆ. ಮೃತನನ್ನು ಕೊಣಾಜೆ ಸಮೀಪದ ನಡುಪದವು ನಿವಾಸಿ ಫಾಝಿಲ್(15) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಫಾಝಿಲ್ ಇಂದು ಮಧ್ಯಾಹ್ನ ಇಲ್ಲಿನ ತೋಟವೊಂದರ ಕೆಲಸಕ್ಕೆ ಸ್ನೇಹಿತರ ಜೊತೆಗೂಡಿ ತೆರಳಿದ್ದು, ತೆಂಗಿನಕಾಯಿ ಹೆಕ್ಕಿದ ಬಳಿಕ ತೋಟದ ಪಕ್ಕವೇ ಹರಿಯುವ ನದಿ ಕಿನಾರೆಯ ಬಳಿ ತೆರಳಿ ಕೈಕಾಲು ತೊಳೆಯಲು ಇಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದು ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಣಾಜೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.