ಸಚಿನ್‌ ವಿಕೆಟ್‌ ಪಡೆದಿದ್ದ ಬ್ರೆಸ್ನನ್‌ಗೆ ಕೊಲೆ ಬೆದರಿಕೆ!

ಲಂಡನ್: ಭಾರತದಲ್ಲಿ ಕ್ರಿಕೆಟ್‌ ಮೇಲಿನ ಹುಚ್ಚು, ಅದರಲ್ಲೂ ಸಚಿನ್‌ ತೆಂಡೂಲ್ಕರ್‌ ಬಗೆಗಿನ ಕ್ರೇಝ್‌ ಎಷ್ಟರಮಟ್ಟಿಗೆ ಇದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದಕ್ಕೀಗ ಸದ್ಯ ಮತ್ತೊಂದು ನಿದರ್ಶನ ಲಭಿಸಿದೆ. ಸಚಿನ್‌ ಅವರನ್ನು ೯೦ ರನ್‌ ವೇಳೆ ಔಟ್‌ ಮಾಡಿದ್ದಕ್ಕೆ ಅವರ ಅಭಿಮಾನಿಗಳು ನನಗೆ ಹಾಗೂ ಅಪಾಯರ್‌ಗೆ ಕೊಲೆ ಬೆದರಿಕೆ ಮಾಡಿದ್ದರು ಎಂದು ಇಂಗ್ಲೆಂಡ್‌ ಮಾಜಿ ವೇಗಿ ಟಿಮ್ ಬ್ರೆಸ್ನನ್ ಇದೀಗ ಬಹಿರಂಗಪಡಿಸಿದ್ದಾರೆ.


ಸಚಿನ್ ಅವರ ನೂರನೇ ಶತಕ ಗಳಿಸುವ ಅವಕಾಶ ತಪ್ಪಿಸಿದ್ದಕ್ಕೆ ಅವರ ಅಭಿಮಾನಿಗಳು ನನಗೆ ಹಾಗೂ ಅಂಪೈರ್ ರಾಡ್ ಟಕ್ಕರ್ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದರು. ಅಂಪೈರ್ ಹಾಗೂ ನಾನು ಬೆದರಿಕೆ ಕರೆಯಿಂದ ಆತಂಕಕ್ಕೆ ಒಳಗಾಗಿದ್ದೆವು. ಅಷ್ಟೇ ಅಲ್ಲದೆ ನನಗೆ ಟ್ವಿಟರ್ ನಲ್ಲಿ ಹಾಗೂ ಅಂಪೈರ್ ಟಕ್ಕರ್ ಅವರ ಮನೆಯ ವಿಳಾಸಕ್ಕೆ ಬೆದರಿಕೆಯ ಪತ್ರಗಳು ಬಂದಿದ್ದವು. ಸಚಿನ್ ವಿಕೆಟ್ ಆಗಿದ್ದರೂ ಔಟ್ ಎಂದು ತೀರ್ಪು ಕೊಡಲು ಎಷ್ಟು ಧೈರ್ಯ ನಿಮಗೆ ಎಂದು ಟಕ್ಕರ್ ಅವರಿಗೆ ಕೇಳಲಾಗಿತ್ತು. ಇದರಿಂದಾಗಿ ಅವರು ಪೊಲೀಸ್ ಭದ್ರತೆ ಪಡೆದುಕೊಂಡಿದ್ದರು ಎಂದು ಟಿಮ್ ಬ್ರೆಸ್ನನ್ ಹೇಳಿದ್ದಾರೆ. 2012ರ ಏಷ್ಯಾಕಪ್‍ನಲ್ಲಿ ಬಾಂಗ್ಲಾದೇಶದ ವಿರುದ್ಧ ತಮ್ಮ 100ನೇ ಶತಕ ಪೂರ್ಣಗೊಳಿಸಿದ್ದರು. 2011ರ ಓವೆಲ್ ಟೆಸ್ಟ್ ಪಂದ್ಯದಲ್ಲಿ ಸಚಿನ್ 91 ರನ್ ಗಳಿಸಿದ್ದರು. ಕೇವಲ 9 ರನ್ ಬಾರಿಸಿದ್ದರೆ 100ನೇ ಶತಕ ದಾಖಲಾಗುತ್ತಿತ್ತು. ಆದರೆ ಟಿಮ್ ಬ್ರೆಸ್ನನ್ ಬೌಲಿಂಗ್‍ನಲ್ಲಿ ಮಾಸ್ಟರ್ ಬ್ಲಾಸ್ಟರ್ ಎಲ್‍ಬಿಡಬ್ಲ್ಯೂನಿಂದ ವಿಕೆಟ್ ಒಪ್ಪಿಸಿದರು. ಚೆಂಡು ಲೆಗ್‍ಸ್ಟಂಪ್ ಮಿಸ್ ಆದಂತೆ ಕಂಡು ಬಂದಿದ್ದರಿಂದ ನನಗೆ ಹಾಗೂ ಅಂಪೈರ್ ಟಕ್ಕರ್ ಅವರಿಗೆ ಬೆದರಿಕೆಯ ಕರೆಗಳು ಬಂದಿದ್ದವು ಎಂದು ಬಹಿರಂಗಪಡಿಸಿದ್ದಾರೆ. ಕೊರೊನಾ ಲಾಕ್‍ಡೌನ್‍ನಿಂದಾಗಿ ಕ್ರೀಡಾಪಟುಗಳು ಅನೇಕ ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ತಾವು ದ್ವಿಶತಕ ಗಳಿಸಿದ್ದಾಗ ಪತ್ನಿ ಯಾಕೆ ಕಣ್ಣೀರು ಹಾಕಿದ್ದರು ಎನ್ನುವ ವಿಚಾರವನ್ನು ತಿಳಿಸಿದ್ದರು. ಸದ್ಯ ಟಿಮ್ ಬ್ರೆಸ್ನನ್ ಅವರು ವಿಶೇಷ ಸಂದರ್ಭವನ್ನು ನೆನೆದಿದ್ದಾರೆ.

Leave a Reply

Your email address will not be published. Required fields are marked *