ಅಪಘಾತದಲ್ಲಿ ಗಾಯಗೊಂಡಿದ್ದ ನ್ಯಾಯವಾದಿ ಮೃತ್ಯು

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಗರದ ನ್ಯಾಯವಾದಿ ಬಿ.ಎಂ. ದುಗ್ಗಪ್ಪ ಅವರು ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ನಿಧನರಾರದು. ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಅವರು ಗಂಭೀರ ಗಾಯಗೊಂಡಿದ್ದರು.
ಸುಳ್ಯ ಮೂಲದ ದುಗ್ಗಪ್ಪ ಅವರು ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರಿದ್ದ ಸ್ಕೂಟರ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಪತ್ನಿ ಮತ್ತು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.